- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾರ್ಕಳ : ಅರ್ಚಕ ನೇಣು ಬಿಗಿದು ಆತ್ಮಹತ್ಯೆ

Sharma [1]ಕಾರ್ಕಳ : ದೇವಳವೊಂದರ ಅರ್ಚಕ ರವಳನಾಥ ಶರ್ಮ(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ನಗರದ ಸ್ಟೇಟ್‌ಬ್ಯಾಂಕ್ ಇಂಡಿಯಾ ಬಳಿಯ ಮಹಾಲಸ ನಿವಾಸಿಯಾಗಿರುವ ಅವರು ಎಂಬಿಎ ಪದವೀದಾರರಾಗಿದ್ದರು.  ಈ ಹಿಂದೆ ಕಾರ್ಕಳದ ಕಾಲೇಜುವೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದರು.

ಮೃತರು ತಂದೆ,ತಾಯಿ,ತಮ್ಮ,ಪತ್ನಿ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ನಗರ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಅಗಮಿಸಿ ಮಹಜರು ನಡೆಸಿದ್ದಾರೆ. ಮಾನಸಿಕ ಖಿನ್ನತೆ ಘಟನೆಗೆ ಕಾರಣವೆನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.