ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬದ ದಿನ ಪೊಕೋಡಾ ತಯಾರಿಸಿ ಮಾರಾಟ ಮಾಡಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

7:06 PM, Friday, September 17th, 2021
Share
1 Star2 Stars3 Stars4 Stars5 Stars
(No Ratings Yet)
Loading...

Youth Congressಮಂಗಳೂರು  :   ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಘಟಕದ ವತಿಯಿಂದ  ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬವನ್ನು ಪೊಕೋಡಾ ತಯಾರಿಸಿ ಮಾರಾಟ ಮಾಡಿ ಪ್ರತಿಭಟಿಸಿಸುವ ಮೂಲಕ ಆಚರಿಸಿದರು.

ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ. ನರೇಂದ್ರ ಮೋದಿ ಸರಕಾರದ ಕಾಲದಲ್ಲಿ ಹೆಚ್ಚಿದ ನಿರುದ್ಯೋಗ ಮತ್ತು ಬೆಲೆಯೇರಿಕೆಯಾಗಿದೆ  ಎಂದು ಅವರು ಧಿಕ್ಕಾರ ಘೋಷಣೆ ಕೂಗಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಮಾಜಿ ಶಾಸಕ ಮೊಯ್ದೀನ್ ಬಾವಾ, ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಡಾ.ಶೇಖರ್ ಪೂಜಾರಿ, ಪ್ರಕಾಶ್ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಸಂಶುದ್ದೀನ್ ಬಂದರ್, ಆಶೀತ್ ಪಿರೇರಾ, ಸರ್ಫಾಝ್ ನವಾಝ್ ಬಾಳ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಸುರೇಶ್ ಜೋರಾ ಬಂಟ್ವಾಳ, ಶಾಹುಲ್ ಹಮೀದ್ ಸುಳ್ಯ, ಅನಿಲ್ ಪೈ ಬೆಳ್ತಂಗಡಿ, ಅಶೋಕ್ ಕುಮಾರ್ ಮುಲ್ಕಿ, ಜಯ ಕುಮಾರ್ ಮೂಡಬಿದ್ರೆ, ಸಿದ್ದೀಕ್ ಅಕ್ಬರ್ ಉಪ್ಪಿನಂಗಡಿ, ಶ್ರೀಪ್ರಸಾದ್ ಪುತ್ತೂರು, ಇಬ್ರಾಹೀಂ ನವಾಝ್ ಪಾಣೆಮಂಗಳೂರು, ಫೈಝಲ್ ಕಡಬ, ರಮಾನಂದ ಪೂಜಾರಿ, ದೀಪ್ತಿ ಕೋಟ್ಯಾನ್, ಸೌಮ್ಯ ಲತಾ, ರೋಶನ್ ರೈ, ದಿನೇಶ್ ಪಿ.ಎಸ್, ಟಿ.ಹೊನ್ನಯ್ಯ, ಪ್ರಸಾದ್ ಗಾಣಿಗ, ಶೈಲಜಾ ಅಮರ್ ನಾಥ್, ಉಮೈ ಬಾನು, ಇರ್ಷಾದ್ ಗೂಡಂಗಡಿ, ಹರ್ಷಾದ್ ಮುಲ್ಕಿ, ಶೋಭಾ ಪಡೀಲ್, ಶಕುಂತಲಾ ಶೆಟ್ಟಿ, ತೌಸೀಫ್ ಫರಂಗಿಪೇಟೆ, ಮೀನಾ ಟೆಲ್ಲಿಸ್, ಹಸನ್ ಫಳ್ನೀರ್, ಅಲ್ಫಾಝ್, ಯೂಸುಫ್ ಉಚ್ಚಿಲ್, ಮನ್ಸೂರ್ ಕುದ್ರೋಳಿ, ಕೌಶಿಕ್ ಬೋಳಾರ, ಫಯಾಝ್ ಅಮ್ಮೆಮ್ಮಾರ್, ನಾಗೇಂದ್ರ ಉಜ್ಜೋಡಿ, ಪ್ರತೀಕ್ ಕೊಟ್ಟಾರಿ, ಆಸಿಶ್ ನಾಯ್ಕ್ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English