[1]ಮಂಗಳೂರು : ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸುತ್ತಿದ್ದೀರಾ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಧರ್ಮೇಂದ್ರ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? ಯಾವ ತುಘಲಕ್ ಸರ್ಕಾರ ನಡೆಸುತ್ತಿದ್ದಿರಾ? ಎಂದು ಪ್ರಶ್ನಿಸಿದರು.
ಮೈಸೂರಿನಲ್ಲಿ ದೇಗುಲವನ್ನು ಧ್ವಂಸ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನೇಕ ಧಾರ್ಮಿಕ ಕೇಂದ್ರಗಳ ಪಟ್ಟಿ ರೆಡಿ ಮಾಡಲಾಗಿದೆ. ಆದರೆ ಇತಿಹಾಸದಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಒಡೆದದ್ದನ್ನು ತೋರಿಸಲಿ. ಅದ್ಯಾಕೆ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿವೆ. ನಾವೇನು ಸುಮ್ಮನೇ ಕೂತಿದ್ದೀವಿ ಎಂದು ಭಾವಿಸಿದ್ದೀರಾ’ ಎಂದು ಧರ್ಮೇಂದ್ರ ಪ್ರಶ್ನಿಸಿದ್ದರು.
ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ, ದೇವಾಲಯ ಧ್ವಂಸದ ಮೂಲಕ ಅಲ್ಪಸಂಖ್ಯಾತ ಮತಗಳಿಕೆಯ ಓಲೈಕೆ ಮಾಡುತ್ತಿದ್ದೀರಿ. ಬಿಜೆಪಿಯಿಂದ ಅಲ್ಪಸಂಖ್ಯಾತರ ಓಲೈಕೆಯಾಗುತ್ತಿದೆ. ಬೊಮ್ಮಾಯಿಯವರೇ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಧಾರ್ಮಿಕ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರೇ ನೀವು ಮೊಟ್ಟೆ ಕದ್ದು ಹಣಮಾಡಿದ್ದೀರಿ. ಇದೀಗ ದೇವಸ್ಥಾನಗಳನ್ನು ಧ್ವಂಸ ಮಾಡಿ ಯಾಕೆ ದುಡ್ಡು ಮಾಡಲು ಹೊರಟಿದ್ದೀರಿ. ಸಂಘಪರಿವಾರ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡೋದು ಅಲ್ಲ. ಪರಿವಾರ ಸಂಘಟನೆಗಳು ಬಿಜೆಪಿಯನ್ನೇ ಬಹಿಷ್ಕಾರ ಮಾಡಲಿ ಎಂದು ವಾಗ್ದಾಳಿ ನಡೆಸಿದರು.
ಆದರೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಡಾ.ಲೋಹಿತ್ ಕುಮಾರ್ ಸುವರ್ಣ ಎಂಬವರು ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಹಾಕಿರುವುದಾಗಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.