ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ ಎಂಬ ಶಬ್ದ ಬಳಕೆ ಮಾಡಿದ್ದಕ್ಕೆ ನಾನು ಕ್ಷಮೆ ಕೇಳುತ್ತೇನೆ : ಧರ್ಮೇಂದ್ರ

8:24 PM, Sunday, September 19th, 2021
Share
1 Star2 Stars3 Stars4 Stars5 Stars
(No Ratings Yet)
Loading...

Dharmendra ಮಂಗಳೂರು : “ನಾವು ಗಾಂಧಿಯನ್ನೇ ಬಿಟ್ಟಿಲ್ಲ ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧಿಯನ್ನೇ ಬಿಟ್ಟಿಲ್ಲ. ಇನ್ನು ನಿಮ್ಮನ್ನು ಬಿಡುತ್ತೇವಾ?. ಬಿಜೆಪಿ ಒಂದು ಬೆನ್ನುಮೂಳೆ ಇಲ್ಲದ ಸರ್ಕಾರ. ಇವರಿಗಿಂತ ತಾಲಿಬಾನ್‌‌ಗಳು ವಾಸಿ. ಇವರ ಸರ್ಕಾರ ತಾಲಿಬಾನ್‌‌ಗಳಿಗಿಂತ ಕೀಳು” ಎಂದಿದ್ದ  ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ  ಕ್ಷಮೆಯಾಚಿಸಿದ್ದಾರೆ.

“ಸುದ್ದಿಗೋಷ್ಠಿಯಲ್ಲಿ ಗಾಂಧೀಜಿ ಅವರ ಹಿಂದುತ್ವದ ವಿರೋಧ ನೀತಿ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಯಾರಿಗೂ ಕೂಡಾ ಬೆದರಿಕೆ ಹಾಕಿಲ್ಲ” ಎಂದಿದ್ದಾರೆ. “ನನ್ನ ಹೇಳಿಕೆಯಲ್ಲಿ ಹತ್ಯೆ ಎಂಬ ಶಬ್ದವು ಅಸಂವಿಧಾನಿಕವಾಗಿದ್ದರೆ ಆ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ. ಧರ್ಮದ ರಕ್ಷಣೆಗೆ ಹಿಂದೂ ಮಹಾಸಭಾ ಯಾವಾಗಲೂ ನಿಲ್ಲುತ್ತದೆ ಎಂಬುದು ನನ್ನ ಮಾತಿನ ಅರ್ಥ” ಎಂದು ಹೇಳಿದ್ದಾರೆ.

“ಇಲ್ಲಿ ಸಂಸದರು ಶಾಸಕರು ಬಾಲಿಷ ಉತ್ತರ ನೀಡುತ್ತಾರೆ. ಇಲ್ಲಿ ಬಿಜೆಪಿ ಅಲ್ಪಸಂಖ್ಯಾತರ ಮತ ಓಲೈಕೆಗೆ ಮುಂದಾಗಿದೆ. ದೇವಾಲಯ ಧ್ವಂಸದ ಮೂಲಕ ಅಲ್ಪಸಂಖ್ಯಾ ಮತ ಗಳಿಕೆಗೆ ಮುಂದಾಗಿದೆ. ಇವರ ವಿರುದ್ದ ಹಿಂದೂ ಮಹಾ ಸಭಾ ಮುಂದಿನ ಚುನಾವಣೆವರೆಗೆ ಹೋರಾಟ ಮಾಡುತ್ತದೆ” ಎಂದು ಹೇಳಿದ್ದರು.

ಬೆದರಿಕೆ ಹಾಕಿದ ಆರೋಪದ ಬಳಿಕ ಪೊಲೀಸರು ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಪತ್ರಿಕಾಗೋಷ್ಠಿಯಲ್ಲಿದ್ದ ಇತರರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English