- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ

Basayya Vastrada [1]ಹುಬ್ಬಳ್ಳಿ:  ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ.

ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ.

ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು ಕೆಲಸಗಾರರಾಗಿದ್ದಾರೆ. ಘಟನೆಯ ಕುರಿತು ರೈಲ್ವೇ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಬಸಯ್ಯಗೆ ಇನ್‍ಸ್ಟಾಗ್ರಾಮ್ ನಲ್ಲಿ 9 ಸಾವಿರ ಫಾಲೋವರ್ಸ್ ಹೊಂದಿದ್ದಾನೆ.