- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರದೀಪ ಕುಮಾರ ಕಲ್ಕೂರ ರಿಗೆ ಸನ್ಮಾನ

Kalkura [1]ಬೆಂಗಳೂರು  : ಕನ್ನಡ ಸಾಹಿತ್ಯ ಪರಿಷತ್ತಿನ ಚರಿತ್ರೆಯಲ್ಲೇ ಪ್ರಪ್ರಥಮವಾಗಿ ಸತತ 5 ಬಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಸಮರ್ಥ ಸೇವೆ ಸಲ್ಲಿಸುವ ಮೂಲಕ ಸರ್ವತ್ರ ಶ್ಲಾಘನೆಗೆ ಪಾತ್ರರಾದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಅವರನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಬೆಂಗಳೂರಿನ ವಿದ್ಯಾಪೀಠದಲ್ಲಿ ತಮ್ಮ ಚಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಿದರು.

ಕಲೆ, ಸಾಹಿತ್ಯ, ನಾಡು-ನುಡಿ, ರಾಷ್ಟ್ರಧರ್ಮವನ್ನು ಪಾಲಿಸುವ ಮೂಲಕ ಕನ್ನಡದ ಕಾಯಕದಲ್ಲಿ ಸದಾ ನಿರತವಾಗಿರುವ ಕಲ್ಕೂರರು “ಕನ್ನಡದ ಕರ್ಮಯೋಗಿ” ಎಂದು ಬಣ್ಣಿಸಿದರು.

ಈ ಸಂದರ್ಭ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ವಿಷ್ಣು ಆಚಾರ್ಯ, ಕೃಷ್ಣ ಆಚಾರ್ಯ, ಕೇಶವ ಆಚಾರ್ಯ ಕೆ. ಅಶ್ವತ್ಥಾಮರಾವ್, ಉದ್ಯಮಿ ಕೃಷ್ಣ ಮೂರ್ತಿ ರಾವ್ ಹಾಗೂ ವಿದ್ಯಾಪೀಠದ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.