- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಾನಸಿಕ ಕಾಯಿಲೆ ಯಿಂದ ನೇಣಿಗೆ ಶರಣಾದ ಉಪನ್ಯಾಸಕಿ

mamatha [1]ಕಾರ್ಕಳ : ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿಯೊಬ್ಬರು ಮಾನಸಿಕ ಕಾಯಿಲೆ ಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.20ರಂದು ಬೆಳಗ್ಗೆ ಪೆರ್ವಾಜೆ ಎಂಬಲ್ಲಿ ನಡೆದಿದೆ.

ಮೃತರನ್ನು ಕಾರ್ಕಳದ ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಮಮತಾ (41) ಎಂದು ಗುರುತಿಸಲಾಗಿದೆ.

ಕಳೆದ 2 ತಿಂಗಳಿನಿಂದ ವಿಪರೀತ ಮಧುಮೇಹ ಹಾಗೂ ಮಾನಸಿಕ ಕಾಯಿಲೆ ಬಳಲುತ್ತಿದ್ದ ಇವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾನಸಿಕ ಒತ್ತಡದಲ್ಲಿ ಸರಿಯಾಗಿ ಔಷಧಿ ತೆಗೆದು ಕೊಳ್ಳದ ಇವರು, ಕೆಲವು ದಿನದಿಂದ ಕಾಲೇಜಿಗೂ ಸರಿಯಾಗಿ ಹೋಗುತ್ತಿರಲಿಲ್ಲ ಎನ್ನಲಾಗಿದೆ.

ಮೃತರ ಮಗ ಶಾಲೆ ಮುಗಿಸಿ ಮನೆಗೆ ಬಂದಾಗ ತಾಯಿ, ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.