ರಾಷ್ಟ್ರಪತಿಗಳಿಗೆ ರಾಮಾಯಣ ದರ್ಶನಂ ಮತ್ತು ಪರ್ವ ಕಾದಂಬರಿ ಕೊಡುಗೆ ನೀಡಿದ ಸಚಿವ ಸುನಿಲ್ ಕುಮಾರ್

8:41 PM, Wednesday, October 6th, 2021
Share
1 Star2 Stars3 Stars4 Stars5 Stars
(No Ratings Yet)
Loading...

Ramayana Darshanaಬೆಂಗಳೂರು : ಘನತೆವೆತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಬೆಂಗಳೂರಿನ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸುನಿಲ್ ಕುಮಾರ್ ಅವರು ಕುವೆಂಪು ಅವರ” ಶ್ರೀ ರಾಮಾಯಣ ದರ್ಶನಂ” ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ,”ಪರ್ವ” ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English