[1]ಉಪ್ಪಿನಂಗಡಿ : ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವೃದ್ಧನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಗೇರುಕಟ್ಟೆಯ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ (70) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಿಂದ ಉಪ್ಪಿನಂಗಡಿಗೆ ಬಸ್ಸಿನಲ್ಲಿ ಬಂದು ನೇತ್ರಾವತಿ ನದಿ ಸೇತುವೆ ಮೇಲಿಂದ ಮುತ್ತಪ್ಪ ಹಾರಿದ್ದಾರೆ. ತಕ್ಷಣ ಸ್ಥಳೀಯ ನಿವಾಸಿಗಳು ರಕ್ಷಣೆಗಾಗಿ ನದಿಗೆ ಹಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.