[1]ಮಂಗಳೂರು: ಬಂಟ್ವಾಳ ಮುಂಡಾಡಿಯಲ್ಲಿ ವಿಶ್ವ ಹಿಂದೂ ಪರಿಷತ್ ಕಟ್ಟೆ ಒಡೆದ ಮಾದರಿಯಲ್ಲೇ ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಒಡೆದು ಹಾನಿ ಮಾಡಿರುವುದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಪಣಂಬೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.