- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ

Vishvesha Thirtha [1]ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಕೇಂದ್ರ ಸರಕಾರವು ಮರಣೋತ್ತರವಾಗಿ ಘೋಷಿಸಲಾದ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಯನ್ನು ನವೆಂಬರ್ 8ರಂದು ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಿದೆ.

ಪೇಜಾವರ ಮಠಾಧೀಶರಾದ ಶ್ರಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಪ್ರಶಸ್ತಿಯನ್ನು ಸ್ವೀಕರಿಸಲಿರುವರು.

ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಅವರಿಗೆ ಕೇಂದ್ರ ಸರಕಾರವು 2020ನೇ ಸಾಲಿನ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು. ಆದರೆ ಕೋವಿಡ್-19 ಕಾರಣದಿಂದ ಇದುವರೆಗೆ ಪ್ರಶಸ್ತಿ ಪ್ರದಾನ ನಡೆದಿರಲಿಲ್ಲ.

ಪ್ರಶಸ್ತಿ ಸ್ವೀಕರಿಸಲು ಶ್ರಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ನ.7ರಂದು ಹೊಸದಿಲ್ಲಿಗೆ ತೆರಳಿಲಿದ್ದಾರೆ.