ಅತ್ಯಾಚಾರಿಗಳ ವಿರುದ್ದ ಪ್ರಬಲ ಕಾನೂನು ರೂಪಿಸುವಂತೆ ಎಬಿವಿಪಿ ಮನವಿ

12:58 PM, Saturday, January 5th, 2013
Share
1 Star2 Stars3 Stars4 Stars5 Stars
(No Ratings Yet)
Loading...

ABVP Protestಮಂಗಳೂರು : ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಧಪಟ್ಟಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೀಡಿದ ದೇಶವ್ಯಾಪಿ ಪ್ರತಿಭಟನೆಗೆ ಎಲ್ಲೆಡೆಯಂತೆ ಮಂಗಳೂರಿನಲ್ಲು ಉತ್ತಮ ಬೆಂಬಲ ವ್ಯಕ್ತವಾಗಿದೆ.

ABVP Protestದಿಲ್ಲಿ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು ಅತ್ಯಾಚಾರಕೊಳಪಟ್ಟ ವಿದ್ಯಾರ್ಥಿಯ ಸಾವು ದುರದೃಷ್ಟಕರ ಸಂಗತಿ. ಸಮಾಜದಲ್ಲಿ ಇಂತಹ ಪ್ರಕರಣಗಳು ಮತ್ತೆ ಮತ್ತೆ ನಡೆಯುತ್ತಿದ್ದು ದೇಶದ ಜನತೆ ತಲೆತಗ್ಗಿಸುವಂತಾಗಿದೆ ಆದರಿಂದ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದಲ್ಲದೆ ಯುವಶಕ್ತಿ ಇದರ ವಿರುದ್ಧ ಹೋರಾಡಬೇಕು ಪ್ರತಿಭಟನೆಯ ಸಂಘಟನಾ ಕಾರ್ಯದರ್ಶಿ ವಿನಯ್ ಹೊರಟ್ಟಿ ಹೇಳಿದರು. ಅತ್ಯಾಚಾರಿಗಳ ವಿರುದ್ಧ ಪ್ರಬಲ ಕಾನೂನು ರೂಪಿಸುವಂತೆ ಘೋಷಣೆಗಳನ್ನು ಕೂಗುತ್ತ ಪ್ರತಿಭಟನಾಕಾರರು ನಗರದ ಹಂಪನಕಟ್ಟ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English