ಖಾಸಗಿ ಟಿವಿ ಚಾನೆಲ್ ವರದಿಗಾರನ ಮೇಲೆ ವಕೀಲರಿಂದ ಹಲ್ಲೆ

3:14 PM, Tuesday, November 23rd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

yadunandan ಮಂಗಳೂರು : ಖಾಸಗಿ ಟಿವಿ ಚಾನೆಲ್ ಒಂದರ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.

ಹಲ್ಲೆಗೊಳಗಾದ ಸುಖ್ ಪಾಲ್ ಪೊಳಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಸಂಜೆಯ ವೇಳೆ ಘಟನೆ ನಡೆದಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಠಾಣೆಯಲ್ಲಿ ಪ್ರತಿದೂರು ಕೂಡ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯಿಂದ ಕ್ರೀಡಾ ಕೋಟಾದಲ್ಲಿ ಹಣ ಪಡೆಯಲು ವಿದ್ಯಾರ್ಥಿನಿಯೊಬ್ಬಳಿಗೆ ಸುಕ್ಪಾಲ್ ಪ್ರಭಾವ ಬೀರಿದ್ದಾರೆ, ಅಲ್ಲದೆ ಇತ್ತೀಚೆಗೆ ನಡೆದ ಕೆಳದಿ ಚೆನ್ನಮ್ಮ ಕ್ರೀಡಾ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನ ಪಡೆಯಲು ಅವರು ರಾಜಕೀಯ ಪ್ರಭಾವಕ್ಕೆ ಶಿಫಾರಸು ಮಾಡಿದ್ದರು ಎಂದು ವಕೀಲ ಆರೋಪಿಸಿದ್ದಾರೆ. ಇದೇ ವಿಷಯದಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆದಿದೆ ಎನ್ನಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English