ಸೋಲುವ ಭೀತಿಯಿಂದ ಕಾಂಗ್ರೆಸ್ ಒಳಒಪ್ಪಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಟೀಕೆ

10:41 AM, Friday, December 10th, 2021
Share
1 Star2 Stars3 Stars4 Stars5 Stars
(No Ratings Yet)
Loading...

Nalinkumar-Kateelಮಂಗಳೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಯಾವುದೇ ಪಕ್ಷದ ಜತೆ ಒಳ ಒಪ್ಪಂದ ಅಗತ್ಯ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿದೆ. ಹಾಗಾಗಿ ಒಳ ಒಪ್ಪಂದದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು `ಬಿಜೆಪಿ ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಘಟನಾತ್ಮಕವಾಗಿ ಎದುರಿಸಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಸೋಲುತ್ತಾ ಬಂದಿದೆ’ ಎಂದರು.

ರಾಜ್ಯದಲ್ಲಿ ಮುಂದಿನ ಬಾರಿ ಬಿಜೆಪಿ ೧೫೦ ಸ್ಥಾನ ಗೆದ್ದು ಅಧಿಕಾರ ಪಡೆಯುವುದು ನಿಶ್ಚಿತ. ಆದರೆ ಕಾಂಗ್ರೆಸ್‌ನಲ್ಲಿ ಈಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಜಗಳ ಶುರುವಾಗಿದೆ. ನಾಲ್ಕು ಮಂದಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಸಿದ್ಧರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್ ಅವರೇ ಸೋಲಿಸಲಿದ್ದಾರೆ. ಖರ್ಗೆ ಅವರನ್ನು ಪರಮೇಶ್ವರ್ ಸೋಲಿಸಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English