ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳ ಮೇಲೆ ಹೆಜ್ಜೇನು ದಾಳಿ, 8 ಮಂದಿ ಆಸ್ಪತ್ರೆಗೆ

12:10 PM, Tuesday, December 21st, 2021
Share
1 Star2 Stars3 Stars4 Stars5 Stars
(No Ratings Yet)
Loading...

Bee Attackಕಿನ್ನಿಗೋಳಿ: ವಸತಿ ಸಮುಚ್ಚಯದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿಯಿಂದ  8 ಮಂದಿ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ಗಾಯಗೊಂಡು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಾದ ಘಟನೆ  ಕಿನ್ನಿಗೋಳಿಯ  ಮೂರುಕಾವೇರಿಯ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ  ಕೆನರಾ ಲೈಟಿಂಗ್ ಸಿಬ್ಬಂದಿ ಬೈಕ್‌ನಲ್ಲಿ ತೆರಳುತ್ತಿರುವಾಗ ನೊಣಗಳ ಹಿಂಡು ದಾಳಿ ಮಾಡಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಳಿಜೋರ ನೀರಳಿಕೆ ನಿವಾಸಿ ರವಿ, ಮೂರುಕಾವೇರಿ ರೋಟರಿ ಶಾಲೆ ಶಿಕ್ಷಕ ಸೂರ್ಯಕಾಂತ್ ತೀವ್ರ ಗಾಯಗೊಂಡು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಉಳಿದಂತೆ ರಿಚರ್ಡ್ ನಝರತ್ ಮೂರುಕಾವೇರಿ, ರಿವಿಯಾನ್ ಮೂರುಕಾವೇರಿ, ಶರತ್ ಪೂಜಾರಿ ಮಾರಡ್ಕ, ಅಲ್ಬರ್ಟ್ ಡಿಸೋಜ, ಮನೋಹರ್ ಮುಚ್ಚೂರು ಆಸ್ಪತ್ರೆಗೆ ದಾಖಲಾಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಘಟನೆ ನಡೆದ ಸ್ಥಳ, ಆಸ್ಪತ್ರೆಗೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಯೀಶ್ ಚೌಟ, ಅರಣ್ಯಾಧಿಕಾರಿ ನಾಗೇಶ್ ಬಿಲ್ಲವ, ಸಿಬ್ಬಂದಿ ರಾಜು ಎಲ್.ಜೆ, ಸಂತೋಷ್ ಭೇಟಿ ನೀಡಿದ್ದಾರೆ

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುತುವರ್ಜಿಯಲ್ಲಿ ವಸತಿ ಸಮುಚ್ಚಯದಲ್ಲಿನ ಹೆಜ್ಜೇನು ತೆರವು ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಮುಚ್ಚೂರಿನ ಜೇನು ಹಿಡಿಯುವ ಯುವಕರ ತಂಡವನ್ನು ನಿಯೋಜನೆ ಮಾಡಲಾಗಿದೆ ಎಂದು ಕಿನ್ನಿಗೋಳಿ ಪಪಂ ಮುಖ್ಯಾಧಿಕಾರಿ ಸಾಯೀಶ್ ಚೌಟ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English