[1]ಮಂಗಳೂರು : ಎನ್ಐಟಿಕೆ ವಿದ್ಯಾರ್ಥಿಯೊಬ್ಬ ಸಾಲದ ಬಾಧೆಯಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎನ್ಐಟಿಕೆ ಕಾಲೇಜಿನಲ್ಲಿ ಬಿಟೆಕ್ನಲ್ಲಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ.
ಸೌರಭ್, ತನ್ನ ಕೋಣೆಯಲ್ಲೇ ನೇಣು ಬಿಗಿದುಕೊಂಡಿದ್ದಾನೆ.
ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂಬುದಾಗಿ ಡೆತ್ನೋಟ್ನಲ್ಲಿ ಬರೆದಿದ್ದ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.