ಕೊರಗ ಸಮುದಾಯದ ಮೆಹಂದಿಯಲ್ಲಿ ಡಿ.ಜೆ ವಿವಾದ, ಮಂಜುನಾಥ್ ಭಂಡಾರಿ ಭೇಟಿ

8:12 PM, Friday, December 31st, 2021
Share
1 Star2 Stars3 Stars4 Stars5 Stars
(No Ratings Yet)
Loading...

Manjunath Bhandary ಉಡುಪಿ : ಕುಂದಾಪುರ ತಾಲೂಕಿನ ಕೋಟ ಎನ್ನುವ ಗ್ರಾಮದಲ್ಲಿ ಕೊರಗ(ಪರಿಶಿಷ್ಟ ಪಂಗಡ) ಸಮುದಾಯಕ್ಕೆ ಸೇರಿದ ರಾಜೇಶ್ ಎನ್ನುವ ಯುವಕನ ಮದುವೆ (ಮೆಹಂದಿ) ಸಂಭ್ರಮದಲ್ಲಿ ಡಿ.ಜೆ ಹಾಕಿದ್ದರು ಎನ್ನುವ ಕಾರಣಕ್ಕೆ ನಡೆದ ಕೃತ್ಯ ಖಂಡನೀಯ . ಈ ಘಟನೆಯಿಂದ ನೊಂದ ಕೊರಗ ಪರಿವಾರದ ಮನೆಗೆ ವಿಧಾನ ಪರಿಷತ್ತಿ ಗೆ ನೂತನ ಸದಸ್ಯರಾಗಿ ಆಯ್ಕೆಯಾದ  ಮಂಜುನಾಥ್ ಭಂಡಾರಿಯವರು ಭೇಟಿ ನೀಡಿ ಸಾಂತ್ವಾನದ ಮಾತುಗಳನ್ನಾಡಿ ಘಟನೆಯಿಂದ ನೊಂದ ಪರಿವಾರಕ್ಕೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.

ನಂತರ ಉಡುಪಿ ಜಿಲ್ಲಾ ಪೋಲಿಸ್ ಕಛೇರಿಗೆ ಭೇಟಿ ನೀಡಿ ಘಟನೆಯ ಬಗ್ಗೆ ಸರಿಯಾಗಿ ಪರಿಶೀಲಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕಾಗಿ ಪೋಲಿಸ್ ಆಯುಕ್ತರಲ್ಲಿ ವಿನಂತಿಸಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಮತ್ತಿತರರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English