- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಂಗ್ರೆಸ್ ಗೂಂಡಾ ವರ್ತನೆ : ಸಚಿವ ಅಶೋಕ್ ಖಂಡನೆ

R Ashoka [1]ಬೆಂಗಳೂರು  : ರಾಮನಗರ ಜಿಲ್ಲೆಯಲ್ಲಿ ಸರ್ಕಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ತೋರಿದ ವರ್ತನೆ ಅವರಿಗೆ ಗೌರವ ತರುವಂತದ್ದಲ್ಲ. ಮಾನ್ಯ ಮುಖ್ಯಮಂತ್ರಿಗಳು ಇರುವ ವೇದಿಕೆಯಲ್ಲಿಯೇ ಅಗೌರವದಿಂದ ನಡೆದುಕೊಂಡಿದ್ದಾರೆ.

ದೇವರಾಜ್ ಅರಸು ಕಾಲದಿಂದಲೂ ಕಾಂಗ್ರೆಸ್ ನಲ್ಲಿ ಗೂಂಡಾ ಸಂಸ್ಕೃತಿ ಇದೆ. ಈ ಘಟನೆಯಿಂದ ಕಾಂಗ್ರೆಸ್ ನಿಜವಾದ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ಇದೇ ರೀತಿಯಲ್ಲಿ ವ್ಯವಹರಿಸುತ್ತದೆ.

ಈ ರೀತಿಯ ತೋಳ್ಬಲಕ್ಕೆ ಮುಂದಾದರೆ ಸಾರ್ವಜನಿಕರೇ ತಕ್ಕಶಾಸ್ತಿ ಮಾಡುತ್ತಾರೆ.  ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.