ಎಸ್ಎಸ್ಎಲ್ ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

4:02 PM, Tuesday, January 4th, 2022
Share
1 Star2 Stars3 Stars4 Stars5 Stars
(No Ratings Yet)
Loading...

sandeepಪುತ್ತೂರು:  ಕೋವಿಡ್ ನಿಯಮಗಳಿಂದ ಬೇಸರಗೊಂಡ  ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಜ . 4 ರಂದು ನಡೆದಿದೆ.

ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಮೃತಪಟ್ಟ ಅಪ್ರಾಪ್ತ ಬಾಲಕ.

ಸೋಮವಾರ ರಾತ್ರಿ ತನ್ನ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಎಷ್ಟು ಹೊತ್ತಾದರೂ ಎದ್ದಿರಲಿಲ್ಲ. ಹೀಗಾಗಿ ಮನೆಯವರು ಕೋಣೆಯೊಳಗೆ ಹೋಗಿ ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಂದೀಪ್ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಾಗಿದ್ದು, ಕಳೆದ 1-2 ವರ್ಷದಿಂದ ಸರ್ಕಾರದ ಕೋವಿಡ್ ನಿಯಮಗಳಿಂದ ಶಾಲೆಗಳು ಸರಿಯಾಗಿ ನಡೆಯುತ್ತಿರಲಿಲ್ಲ, ಮಕ್ಕಳ ಮುಂದಿನ ಭವಿಷ್ಯಕ್ಕೆ ಇದು ತೊಂದರೆಯಾಗುತ್ತಿದೆ ಎಂದು ಗೆಳೆಯರಲ್ಲಿ ಬೇಸರ ವ್ಯಕ್ತಪಡಿಸಿದ್ದ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English