ಬ್ರೇಕ್ ಫೇಲ್ ತಪ್ಪಿದ ಅನಾಹುತ

5:08 PM, Tuesday, January 8th, 2013
Share
1 Star2 Stars3 Stars4 Stars5 Stars
(No Ratings Yet)
Loading...

Mangalore Udupi busಮಂಗಳೂರು : ಉಡುಪಿ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಬಸ್ ನ ಬ್ರೇಕ್ ವೈಫಲ್ಯ ದಿಂದಾಗಿ ಅದೇ ಮಾರ್ಗದ ಮೂಲಕ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಗುದ್ದಿದ್ದು ಬಸ್ಸಿನ ಚಾಲಕ ಮತ್ತು ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾದ ಘಟನೆ ಸೋಮವಾರ ಪಾಂಗಾಳ ಸೇತುವೆಯ ಬಳಿ ಮಧ್ಯಾಹ್ನ ಸಂಭವಿಸಿದೆ.

ಲಾರಿ ಹಾಗೂ ಬಸ್ ಉಡುಪಿ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಸಂದರ್ಭ ವೇಗದೂತ ಬಸ್ಸಿನ ಬ್ರೇಕ್ ವೈಫಲ್ಯಗೊಂಡಿತ್ತು. ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಲಾರಿಯ ಹಿಂಬದಿಗೆ ಗುದ್ದಿದ ಪರಿಣಾಮ ಭಾರೀ ಅನಾಹುತ ವೊಂದು ತಪ್ಪಿದೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English