- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಉಡುಪಿ ಬೈಲಕೆರೆಯ ಬಳಿ ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿದ ಚಾಲಾಕಿ ಕಳ್ಳ

Scooter-Thief [1]ಉಡುಪಿ : ಉಡುಪಿ ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ವಸತಿ ಸಮುಚ್ಚಯದ ಬಳಿ ಕಳ್ಳನೊಬ್ಬ ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕಳವು ಮಾಡಿರುವ ಘಟನೆ ಸೋಮವಾರ ನಡೆದಿದೆ.

ಸ್ಕೂಟರ್ ಕಳ್ಳತನ ಮಾಡಿರುವ ವ್ಯಕ್ತಿಯನ್ನು ಸಾಲಿಗ್ರಾಮ ಸಾಸ್ತಾನ ವ್ಯಾಪ್ತಿಯ ಯುವಕ ಸ್ಕೂಟರ್ ಸಂಖ್ಯೆ KA20 EV6577 ನ್ನು ಈತ ಕಳವು ಮಾಡಿದ್ದಾನೆ. ಬೈಕ್ ಮಾಲೀಕರು ಬೈಲಕೆರೆಯ ಸಾಯಿರಾಧ ಗೋಕುಲ್ ಧಾಮ್ ಬಳಿ ಹೋಂಡಾ ಡಿಯೋ‌ ಸ್ಕೂಟರ್ ಅನ್ನು ನಿಲ್ಲಿಸಿ ಕರ್ಮಷಿಯಲ್ ಪಾರ್ಸೆಲ್ ಕೊಡಲು ಹೋಗಿದ್ದರು. ಈ ವೇಳೆ ಅದೇ ದಾರಿಯಲ್ಲಿ ಬಂದ ಕಳ್ಳನೋರ್ವ ಪಾರ್ಸೆಲ್ ವಸ್ತುವಿನೊಂದಿಗೆ ಸ್ಕೂಟರ್ ಅನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ಆತ ಸ್ಕೂಟರ್ ಅನ್ನು ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.