ಬೆಳ್ತಂಗಡಿ ಮಸೀದಿಯಲ್ಲಿ ಬಿಯರ್ ಬಾಟಲಿ, ಸ್ಥಳೀಯರಲ್ಲಿ ಆತಂಕ

9:28 PM, Thursday, February 24th, 2022
Share
1 Star2 Stars3 Stars4 Stars5 Stars
(No Ratings Yet)
Loading...

Mosqueಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ  ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ನಡೆದಿದೆ.

ಬುಧವಾರ ತಡ ರಾತ್ರಿಯವೇಳೆ ಮಸೀದಿಯ ಆವರಣದೊಳಗೆ ಬಿಯರ್ ಬಾಟಲಿ ಎಸೆದಿದ್ದಾರೆ. ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೇ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ತಿಳಿದು ಬಂದಿದೆ.

ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಲು ಕಾರಣವಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ಎಸಗಿದವರ ಬಗ್ಗೆ ಯಾವುದೇ ಮಾಹಿತಿಗಳು ತಿಳಿದು ಬಂದಿಲ್ಲ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English