[1]ಮಂಗಳೂರು : ಕನಾ೯ಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಯವರು ಸಮಗ್ರ ಕನಾ೯ಟಕ ಮತ್ತು ಸಮಾಜದ ಎಲ್ಲಾ ವಗ೯ಗಳನ್ನು ಗಮನದಲ್ಲಿ ಇಟ್ಟುಕೊಂಡು ಒಳ್ಳೆಯ ಪ್ರಗತಿಪರ ಬಜೆಟ್ ಮಂಡಿಸಿದ್ದಾರೆ.
ತಮ್ಮ ಚೊಚ್ಚಲ ಬಜೆಟ್ನಲ್ಲಿ ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಆರೋಗ್ಯ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಒತ್ತು ನೀಡಿದ್ದಾರೆ. ಕೋರೊನಾ ಸಂಕಷ್ಟದಿಂದ ಹೊರಬರಲು ಪ್ರಯತ್ನಿಸುತ್ತಿರುವ ಆಥಿ೯ಕತೆಯ ಇತಿಮಿತಿಯಲ್ಲಿ ಇದು ಅತ್ಯುತ್ತಮ ಬಜೆಟ್. ಕರಾವಳಿಯ ಅಭಿವೃದ್ಧಿಯ ದೃಷ್ಟಿಯಿಂದ ದೀರ್ಘಕಾಲಿಕ ಮತ್ತು ಜನೋಪಯೋಗಿ ಯೋಜನೆ ಒಳಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ ಪ್ರತಾಪಸಿಂಹ ನಾಯಕ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.