- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Anushree [1]ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ.

ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.