ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರು ವಿಶ್ವ ವಿದ್ಯಾಲಯ ಪ್ರವೇಶ ವಿರೋಧಿಸಿ, ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

3:18 PM, Wednesday, March 30th, 2022
Share
1 Star2 Stars3 Stars4 Stars5 Stars
(No Ratings Yet)
Loading...

Campus-frontಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ಅವರನ್ನು ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ  ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಹಿನ್ನಲೆಯಲ್ಲಿ ಪೋಲೀಸ್ ಭದ್ರತೆ ಹಾಕಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದ್ದಾರೆ.

ಕೋಮು ದ್ವೇಷದ ಭಾಷಣ ಮಾಡುವ ಆರ್ ಎಸ್‍ ಎಸ್ ಮುಖಂಡ ಪ್ರಭಾಕರ್ ಭಟ್ ಅವರನ್ನು ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ಕೊಡಬಾರದು. ವಿದ್ಯೆ ನೀಡಬೇಕಾದ ಕೇಂದ್ರದಲ್ಲಿ ಕೋಮು ಸಾಮರಸ್ಯ ಕದಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆಯ ನಡುವೆಯೂ ಮಂಗಳೂರು ವಿವಿಯ ಕ್ರೀಡಾಂಣದಲ್ಲಿ ಏರ್ಪಡಿಸಲಾದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಿರಾಂತಕವಾಗಿ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರ ನೆಲೆಯಲ್ಲಿ ಕಲ್ಕಡ್ಕ ಭಟ್‌ ಭಾಗವಹಿಸಿ ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಡೆಸಿದರು. ಮಂಗಳೂರು ವಿವಿ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಸೇರಿದಂತೆ ಗಣ್ಯ ಅತಿಥಿಗಳು ಭಾಗವಹಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English