ಒಂದೂವರೆ ತಿಂಗಳ ಹೆಣ್ಣು ಮಗು ವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಾಯಿ

9:22 PM, Tuesday, September 12th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಕಾಸರಗೋಡು : ಹೆಣ್ಣು ಮಗು ವನ್ನು ತಾಯಿಯೊಬ್ಬಳು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವಳು.

ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಳು ಎನ್ನಲಾಗಿದೆ .ಕೂಡಲೇ ಮಗುವನ್ನು ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿತ್ತು.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು, ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆತೆಯಂತೆ ವರ್ತಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೇರೆ ಯಾವುದಾದರೂ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English