ವಿಟ್ಲ : ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಓರ್ವ ಗಂಭೀರ

7:07 PM, Wednesday, September 13th, 2023
Share
1 Star2 Stars3 Stars4 Stars5 Stars
(No Ratings Yet)
Loading...

ವಿಟ್ಲ : ಇಲ್ಲಿನ ಕುದ್ದುಪದವು ನಿವಾಸಿ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ.

ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಲ್ಲಿ ಓರ್ವ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಇವರಿಬ್ಬರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English