ಚೈತ್ರಾ ಕುಂದಾಪರ ಮತ್ತು 6 ಮಂದಿ 10 ದಿನಗಳ ಕಾಲ ಪೊಲೀಸರ ವಶಕ್ಕೆ

7:21 PM, Wednesday, September 13th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಉಡುಪಿ : ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾರೆಂದು ಚೈತ್ರಾ ಕುಂದಾಪರ ಸೇರಿದಂತೆ 6 ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ.

5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹಾಗೂ ಇತರರನ್ನು ಬೆಂಗಳೂರಿನಲ್ಲಿ 1ನೇ ಎಸಿಎಂಎಂ ಕೋರ್ಟ್​ ನಲ್ಲಿ ಹಾಜರುಪಡಿಸಲಾಗಿತ್ತು. ಈ ವೇಳೆ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶರಿಗೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು.

ಈ ವೇಳೆ ನ್ಯಾಯಾಧೀಶರ ಮುಂದೆ ಉಡುಪಿಯಲ್ಲಿ ಪೊಲೀಸರು ನನ್ನನ್ನು ಹಿಡಿದು ಎಳೆದಾಡಿ ಹಿಂಸೆ ನೀಡಿದ್ದಾರೆ ಎಂದು ಚೈತ್ರಾ ಆರೋಪಿಸಿದ್ದಾರೆ.

ಈ ಬಗ್ಗೆ ಉಡುಪಿ ಠಾಣೆಯ ಎಸಿಪಿ ರೀನಾ ಸುವರ್ಣ ಬಂಧನದ ಬಗ್ಗೆ ಎಲ್ಲಾ ವಿಡಿಯೋ ಮಾಡಲಾಗಿದೆ. ಜೊತೆಗೆ, ಮೆಡಿಕಲ್ ರಿಪೋರ್ಟ್ ಕೂಡ ಮಾಡಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English