ಸುಳ್ಯ: ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಳೆಗೇಟು ಗಣೇಶ ಚತುರ್ಥಿ ಸಂದರ್ಭ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು.
ಈ ಲಕ್ಕಿ ಕೂಪನ್ ಗೆ ಸುಳ್ಯ ಪರಿಸರದಲ್ಲಿ ವಿರೋಧ ವ್ಯಕ್ತವಾಗಿತ್ತು. ಹಿಂದೂ ಧರ್ಮದ ಹಬ್ಬದಲ್ಲಿ ಇಂತಹ ಲಕ್ಕಿ ಕೂಪನ್ ಮಾಡಿದವನ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿತ್ತು.
ಇದೀಗ ಈ ಲಕ್ಕಿ ಕೂಪನ್ ಮಾಡಿದವನನ್ನ ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ಮಾಡಿದ್ದಾರೆ. ಈ ವೇಳೆ ತಪ್ಪು ಒಪ್ಪಿಕೊಂಡಿರುವ ಯುವಕ ಮುಂದೆ ಇಂತಹ ತಪ್ಪು ಆಗದಂತೆ ಕ್ಷಮೆಯಾಚನೆ ಮಾಡಿದ್ದಾನೆ.
ಲಕ್ಕಿ ಕೂಪನ್ ನಲ್ಲಿ ಪ್ರಥಮ ಬಹುಮಾನ ಬ್ಲ್ಯಾಕ್ ಆಂಡ್ ವೈಟ್ ಮದ್ಯ ಹಾಗೂ ದ್ವಿತೀಯ ಬಹುಮಾನವಾಗಿ ಒಂದು ಕೇಸ್ ಬಿಯರ್ ಇಡಲಾಗಿತ್ತು.
ಈ ಲಕ್ಕಿ ಕೂಪನ್ ಮಾಡಿದ ವ್ಯಕ್ತಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಯಿಸಿ ಬಿಟ್ಟುಬಿಡಲಾಗಿದೆ.
Click this button or press Ctrl+G to toggle between Kannada and English