ಗುರು ಡಾ. ಜಯಂತ ಆಠವಲೆಯವರ ಜನ್ಮ ದಿನದ ಅಂಗವಾಗಿ ಹಿಂದೂ ರಾಷ್ಟ್ರ-ಜಾಗೃತಿ ಅಭಿಯಾನ !

7:25 PM, Wednesday, May 18th, 2022
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಸನಾತನ ಸಂಸ್ಥೆಯ ಸಂಸ್ಥಾಪಕರಾಗಿರುವ ಪರಾತ್ಪರ ಗುರು ಡಾಕ್ಟರ್ ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ, ದೇಶದಲ್ಲೆಡೆ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  ಇದರ ಅಂತರ್ಗತ ಜಿಲ್ಲೆಯ ವಿವಿಧೆಡೆಗಳಲ್ಲಿ ಹಿಂದೂ ಐಕ್ಯತಾ ಮೆರವಣಿಗೆಯ ಆಯೋಜನೆ ಮಾಡಲಾಗಿದ್ದು ಶುಕ್ರವಾರ 20 ಮೇ ಈ ದಿನದಂದು ಮಂಗಳೂರಿನ ಜ್ಯೋತಿ ಸರ್ಕಲ್ ದಿಂದ ಮಹಾನಗರ ಪಾಲಿಕೆಯ ತನಕ ಹಿಂದೂ ಐಕ್ಯತಾ ಮೆರವಣಿಗೆಯು ಸಾಗಲಿದೆ. ಈ ಭವ್ಯ ಮೆರವಣಿಗೆಯಲ್ಲಿ ಸಮಸ್ತ ಹಿಂದೂ ಬಾಂಧವರು ಪಾಲ್ಗೊಂಡು ತಮ್ಮ ಧರ್ಮ ಕರ್ತವ್ಯ ನಿಭಾಯಿಸಬೇಕಾಗಿ ಈ ಮೂಲಕ ಕೋರುತ್ತೇವೆ

 ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಈ ಅಭಿಯಾನವು ಶ್ರೀರಾಮನವಮಿಯಿಂದ ಪ್ರಾರಂಭವಾಗಿ ಅಕ್ಷಯ ತೃತೀಯ ಮತ್ತು ಅಕ್ಷಯ ತೃತೀಯದಿಂದ ಮೇ ತಿಂಗಳ ಕೊನೆಯ ವಾರದವರೆಗೂ ದೇಶದಾದ್ಯಂತ ನಡೆಯಲಿದೆ. ಇದರಡಿಯಲ್ಲಿ ಸಾಧನೆಯ ವಿಷಯದಲ್ಲಿ ಪ್ರವಚನ, ಸಾಮೂಹಿಕ ಪ್ರಾರ್ಥನೆ, ದೇವಸ್ಥಾನಗಳ ಸಾಮೂಹಿಕ ಸ್ವಚ್ಛತೆಯಂತಹ ಹಲವು ಉಪಕ್ರಮಗಳನ್ನು ಸಹ ನಡೆಸಲಾಗುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English