ಮಂಗಳೂರು : ಸನಾತನ ಸಂಸ್ಥೆಯ ಸಂಸ್ಥಾಪಕರಾಗಿರುವ ಪರಾತ್ಪರ ಗುರು ಡಾಕ್ಟರ್ ಜಯಂತ ಆಠವಲೆಯವರ ಜನ್ಮೋತ್ಸವದ ನಿಮಿತ್ತ, ದೇಶದಲ್ಲೆಡೆ ‘ಹಿಂದೂ ರಾಷ್ಟ್ರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂತರ್ಗತ ಜಿಲ್ಲೆಯ ವಿವಿಧೆಡೆಗಳಲ್ಲಿ ಹಿಂದೂ ಐಕ್ಯತಾ ಮೆರವಣಿಗೆಯ ಆಯೋಜನೆ ಮಾಡಲಾಗಿದ್ದು ಶುಕ್ರವಾರ 20 ಮೇ ಈ ದಿನದಂದು ಮಂಗಳೂರಿನ ಜ್ಯೋತಿ ಸರ್ಕಲ್ ದಿಂದ ಮಹಾನಗರ ಪಾಲಿಕೆಯ ತನಕ ಹಿಂದೂ ಐಕ್ಯತಾ ಮೆರವಣಿಗೆಯು ಸಾಗಲಿದೆ. ಈ ಭವ್ಯ ಮೆರವಣಿಗೆಯಲ್ಲಿ ಸಮಸ್ತ ಹಿಂದೂ ಬಾಂಧವರು ಪಾಲ್ಗೊಂಡು ತಮ್ಮ ಧರ್ಮ ಕರ್ತವ್ಯ ನಿಭಾಯಿಸಬೇಕಾಗಿ ಈ ಮೂಲಕ ಕೋರುತ್ತೇವೆ
ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಈ ಅಭಿಯಾನವು ಶ್ರೀರಾಮನವಮಿಯಿಂದ ಪ್ರಾರಂಭವಾಗಿ ಅಕ್ಷಯ ತೃತೀಯ ಮತ್ತು ಅಕ್ಷಯ ತೃತೀಯದಿಂದ ಮೇ ತಿಂಗಳ ಕೊನೆಯ ವಾರದವರೆಗೂ ದೇಶದಾದ್ಯಂತ ನಡೆಯಲಿದೆ. ಇದರಡಿಯಲ್ಲಿ ಸಾಧನೆಯ ವಿಷಯದಲ್ಲಿ ಪ್ರವಚನ, ಸಾಮೂಹಿಕ ಪ್ರಾರ್ಥನೆ, ದೇವಸ್ಥಾನಗಳ ಸಾಮೂಹಿಕ ಸ್ವಚ್ಛತೆಯಂತಹ ಹಲವು ಉಪಕ್ರಮಗಳನ್ನು ಸಹ ನಡೆಸಲಾಗುತ್ತಿದೆ.
Click this button or press Ctrl+G to toggle between Kannada and English