ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಆಯ್ಕೆ

8:38 PM, Thursday, October 5th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಮಂಗಳೂರು: ಮಹಾನಗರ ಪಾಲಿಕೆ ವಿಪಕ್ಷ ನಾಯಕರಾಗಿ ಪ್ರವೀಣ್ ಚಂದ್ರ ಆಳ್ವ ಅವರು ಗುರುವಾರ ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜಾ ಅವರಿಂದ ಅಧಿಕಾರವನ್ನು ಸ್ವೀಕರಿಸಿದರು.

ಮಾಜಿ ಶಾಸಕ ಜೆಆರ್ ಲೋಬೊ ಹಾಗೂ ಕಾಂಗ್ರೆಸ್ ಪಕ್ಷದ ಪಾಲಿಕೆಯ ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ಪ್ರವೀಣ್ ಚಂದ್ರ ಆಳ್ವ ಅವರು ಮಾತನಾಡಿ, ಪಾಲಿಕೆ ವಿಪಕ್ಷ ನಾಯಕನಾಗಿ ಪಕ್ಷದ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಜನಪರ ಹೋರಾಟವನ್ನು ನಡೆಸಲಾಗುವುದು. ಬಿಜೆಪಿಯ ತಪ್ಪುಗಳನ್ನು ತೋರಿಸುವಲ್ಲಿ ನಾವು ಯಾವುದೇ ಹಿಂಜರಿಕೆ ತೋರುವುದಿಲ್ಲ ಎಂದು ನುಡಿದರಲ್ಲದೆ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲು ಸಹಕರಿಸಿದ ನಾಯಕರನ್ನು ಹಾಗೂ ಪಕ್ಷದ ಮುಖಂಡರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಜೆಆರ್ ಲೋಬೋ ಅವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಬಾರಿ ವಿಪಕ್ಷ ಸಂಖ್ಯೆ 14 ಇದ್ದರೂ, ಮುಂದಿನ ಎಂದು ನುಡಿದರು.

ನಿಕಟಪೂರ್ವ ವಿಪಕ್ಷ ನಾಯಕ ನವೀನ್ ಡಿಸೋಜ ಶುಭಹಾರೈಸಿದರು.

ಕಾಂಗ್ರೆಸ್ ನಾಯಕ ಮಿಥುನ್ ರೈ, ಮಾಜಿ ವಿಪಕ್ಷ ನಾಯಕ ವಿನಯ್ ರಾಜ್, ರವೂಫ್,ಕವಿತಾ ಸನಿಲ್, ಶಶಿಧರ ಹೆಗ್ಡೆ,ಮನಪಾ ಸದಸ್ಯ ಅನಿಲ್ ಕುಮಾರ್, ಟಿ.ಕೆ ಸುಧೀರ್ ಪದ್ಮರಾಜ್, ವಿಶ್ವಾಸ ದಾಸ್, ಭಾಸ್ಕರ ಮೊಯಿಲಿ, ಅಬ್ದುಲ್ ಸಲೀಂ,ಪ್ರಭಾಕರ ಶ್ರೀಯಾನ್,ಶಾಲೆಟ್ ಪಿಂಟೋ,ಮಮತಾಗಟ್ಟಿ, ಮುತ್ತಿತರ ನಾಯಕರು ಉಪಸ್ಥಿತರಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English