ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು ನಿಧನ

12:17 AM, Thursday, November 2nd, 2023
Share
1 Star2 Stars3 Stars4 Stars5 Stars
(No Ratings Yet)
Loading...

ಕಾರ್ಕಳ : ಅಜೆಕಾರು ಗ್ರಾಮದ ನಿವಾಸಿ ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ಬುಧವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶೇಖರ್ ಅಜೆಕಾರ್ ಇವರು, ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು .

ಬೆಳದಿಂಗಳ ಸಾಹಿತ್ಯ ಕೂಟ ಸಹಿತ ಹಲವು ಸಾಹಿತ್ಯಕೂಟಗಳನ್ನು ಸಂಘಟಿಸುವುದರ ಮೂಲಕ ಕರಾವಳಿ ಪರಿಸರದಲ್ಲಿ ಜನಪ್ರಿಯರಾಗಿದ್ದ ರಲ್ಲದೆ ಮುಂಬೈ ಸಹಿತ ಹಲವೆಡೆ ಪತ್ರಕರ್ತರಾಗಿ ಕೆಲಸ ಮಾಡಿದ್ದರು.

ಬೆಂಗಳೂರು ಪತ್ರಕರ್ತರ ವೇದಿಕೆ ಮೂಲಕ ನಿರಂತರ ಕಾರ್ಯಕ್ರಮಗಳ ಮೂಲಕ ಸಾಧಕರಿಗೆ, ಸಾಹಿತಿಗಳಿಗೆ ಮನೆಯಂಗಳದಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತಿದ್ದರು. ಶೇಖರ್ ಕಂಬಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದು ಆ ಕುರಿತು ಸರಣಿ ಪುಸ್ತಕಗಳನ್ನು ಬರೆದಿದ್ದಾರೆ.

ಇವರು ಪತ್ನಿ,ಓರ್ವ ಮಗ ಓರ್ವ ಮಗಳನ್ನು ಅಗಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English