ಯುವತಿಯ ಹನಿಟ್ರ್ಯಾಪ್​ ಕಾಟ, ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ವೀರ ಯೋಧ

2:12 PM, Thursday, November 9th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಡಿಕೇರಿ : ದೇಶದ ಗಡಿ ಕಾಯುತ್ತಿದ್ದ ವೀರ ಯೋಧ ಯುವತಿ ಪ್ರೀತಿಯ ಬಲೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.

ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡ ಜೀವಿತಾ ಎನ್ನುವಾಕೆ ಯೋಧನಿಗೆ ಹನಿಟ್ರ್ಯಾಪ್​ ಮಾಡಿ ಸಾಯುವಂತೆ ಮಾಡಿದ್ದಾಳೆ.

ಮಡಿಕೇರಿ ನಗರದ ಉಕ್ಕುಡ ನಿವಾಸಿ ನಿವೃತ್ತ ಯೋಧ ಸಂದೇಶ್ (38) ಮಹಿಳೆಯ ಹನಿಟ್ರ್ಯಾಪ್​ಗೆ ಹೆದರಿ ಡೆತ್​ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ.

ನವೆಂಬರ್ 08 ರಂದು ಮನೆ ಸಮೀಪದ ಪಂಪಿನ ಕೆರೆಯಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ.

ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ಮಾಜಿ ಸೈನಿಕ ಸಂದೇಶ್ ತನ್ನ ಸಾವಿಗೆ ಜೀವಿತ, ಆಕೆಯನ್ನು ಬೆಂಬಲಿಸುತ್ತಿದ್ದ ಪೊಲೀಸ್ ಸತೀಶ್ ಹಾಗೂ ರೆಸಾರ್ಟ್ ಮಾಲೀಕ ಸತ್ಯ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟು ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಸ್ಥಳೀಯರು ಸುತ್ತಮುತ್ತಲಿನ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಬಳಿಕ ಮಲ್ಪೆಯ ಹೆಸರಾಂತ ಮುಳುಗು ತಜ್ಞ ಈಶ್ವರ್ ಮತ್ತು ತಂಡದವರನ್ನು ಕರೆಸಿ ಮೃತದೇಹದ ಶೋಧ ಕಾರ್ಯವನ್ನು ಮಾಡಲಾಗಿತ್ತು. 1 ಗಂಟೆಗೂ ಅಧಿಕ ಕಾಲ ಕರೆಯಲ್ಲಿ ಆಕ್ಸಿಜನ್‌ನೊಂದಿಗೆ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಮಾಜಿ ಯೋಧನ ಮೃತ ದೇಹ ಪತ್ತೆಯಾಗಿದೆ. ಆದ್ರೆ, ಮಾಜಿ ಯೋಧ ಕಣ್ಮರೆಯಾಗಿ 30 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ. ಬುಧವಾರ ರಾತ್ರಿ 8:20 ರ ಸುಮಾರಿಗೆ ಕೆರೆಯ 40 ಆಡಿ ಆಳದಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ.

ಸಂದೇಶ್ ಮದುವೆ ಆಗಿದ್ದರೂ ಯುವತಿಯ ಅಂದ- ಚಂದ ಹಾಗೂ ಆಕೆಯ ಮಾತಿಗೆ ಮರುಳಾಗಿ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನೆ. ಆದರೆ, ಈತನಿಗೆ ಮದುವೆಯಾಗಿ ಹೆಂಡತಿಯಿದ್ದರೂ ತನ್ನೊಂದಿಗೆ ಸಲುಗೆಯಿಂದ ನಡೆದುಕೊಂಡ ಎಲ್ಲ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಯುವತಿ ಬ್ಲ್ಯಾಕ್‌ಮೇಲ್‌ ಮಾಡಲು ಮುಂದಾಗಿದ್ದಾಳೆ. ಇದಕ್ಕೆ ತನ್ನ ಸ್ನೇಹಿತರಿಂದಲೂ ಸಾಥ್‌ ಪಡೆದಿದ್ದಾಳೆ.

ಯುವತಿಯ ಬ್ಲ್ಯಾಕ್‌ಮೇಲ್‌ ಯೋಧನ ನಿವೃತ್ತಿಯ ನಂತರವೂ ಬರುವ ಸೆಟಲ್‌ಮೆಂಟ್‌ ಹಣ ಸೇರಿದಂತೆ 50 ಲಕ್ಷ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾಳೆ. ಆದರೆ, ಯೋಧ ತನಗೆ ಮದುವೆಯಾಗಿದ್ದರೂ ಯುವತಿಯ ಪ್ರೀತಿಯ ಬಲೆಗೆ ಸಿಲುಕಿ ಒದ್ದಾಡುತ್ತಿದ್ದನು. ಇದೆಲ್ಲವನ್ನೂ ತನ್ನ ಪತ್ನಿ ಯಶೋಧರೊಂದಿಗೆ ಹೇಳಿಕೊಂಡಿದ್ದನು. ಆದರೆ, ಲೇಡಿಯ ಕಾಟವನ್ನು ತಾಳಲಾರದೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯೋಧನ ಪತ್ನಿ ಯಶೋಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.

ಯುವತಿಯ ಹನಿಟ್ರ್ಯಾಪ್​ ಕಾಟ, ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ವೀರ ಯೋಧ

ಮಡಿಕೇರಿ : ದೇಶದ ಗಡಿ ಕಾಯುತ್ತಿದ್ದ ವೀರ ಯೋಧ ಯುವತಿ ಪ್ರೀತಿಯ ಬಲೆಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ.

ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡ ಜೀವಿತಾ ಎನ್ನುವಾಕೆ ಯೋಧನಿಗೆ ಹನಿಟ್ರ್ಯಾಪ್​ ಮಾಡಿ ಸಾಯುವಂತೆ ಮಾಡಿದ್ದಾಳೆ.

ಮಡಿಕೇರಿ ನಗರದ ಉಕ್ಕುಡ ನಿವಾಸಿ ನಿವೃತ್ತ ಯೋಧ ಸಂದೇಶ್ (38) ಮಹಿಳೆಯ ಹನಿಟ್ರ್ಯಾಪ್​ಗೆ ಹೆದರಿ ಡೆತ್​ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ.

ನವೆಂಬರ್ 08 ರಂದು ಮನೆ ಸಮೀಪದ ಪಂಪಿನ ಕೆರೆಯಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ.

ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ಮಾಜಿ ಸೈನಿಕ ಸಂದೇಶ್ ತನ್ನ ಸಾವಿಗೆ ಜೀವಿತ, ಆಕೆಯನ್ನು ಬೆಂಬಲಿಸುತ್ತಿದ್ದ ಪೊಲೀಸ್ ಸತೀಶ್ ಹಾಗೂ ರೆಸಾರ್ಟ್ ಮಾಲೀಕ ಸತ್ಯ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟು ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಸ್ಥಳೀಯರು ಸುತ್ತಮುತ್ತಲಿನ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಬಳಿಕ ಮಲ್ಪೆಯ ಹೆಸರಾಂತ ಮುಳುಗು ತಜ್ಞ ಈಶ್ವರ್ ಮತ್ತು ತಂಡದವರನ್ನು ಕರೆಸಿ ಮೃತದೇಹದ ಶೋಧ ಕಾರ್ಯವನ್ನು ಮಾಡಲಾಗಿತ್ತು. 1 ಗಂಟೆಗೂ ಅಧಿಕ ಕಾಲ ಕರೆಯಲ್ಲಿ ಆಕ್ಸಿಜನ್‌ನೊಂದಿಗೆ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಮಾಜಿ ಯೋಧನ ಮೃತ ದೇಹ ಪತ್ತೆಯಾಗಿದೆ. ಆದ್ರೆ, ಮಾಜಿ ಯೋಧ ಕಣ್ಮರೆಯಾಗಿ 30 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ. ಬುಧವಾರ ರಾತ್ರಿ 8:20 ರ ಸುಮಾರಿಗೆ ಕೆರೆಯ 40 ಆಡಿ ಆಳದಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ.

ಸಂದೇಶ್ಗೆ ಮದುವೆ ಆಗಿದ್ದರೂ ಯುವತಿಯ ಅಂದ- ಚಂದ ಹಾಗೂ ಆಕೆಯ ಮಾತಿಗೆ ಮರುಳಾಗಿ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನೆ. ಆದರೆ, ಈತನಿಗೆ ಮದುವೆಯಾಗಿ ಹೆಂಡತಿಯಿದ್ದರೂ ತನ್ನೊಂದಿಗೆ ಸಲುಗೆಯಿಂದ ನಡೆದುಕೊಂಡ ಎಲ್ಲ ಫೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಯುವತಿ ಬ್ಲ್ಯಾಕ್‌ಮೇಲ್‌ ಮಾಡಲು ಮುಂದಾಗಿದ್ದಾಳೆ. ಇದಕ್ಕೆ ತನ್ನ ಸ್ನೇಹಿತರಿಂದಲೂ ಸಾಥ್‌ ಪಡೆದಿದ್ದಾಳೆ.

ಯುವತಿಯ ಬ್ಲ್ಯಾಕ್‌ಮೇಲ್‌ ಯೋಧನ ನಿವೃತ್ತಿಯ ನಂತರವೂ ಬರುವ ಸೆಟಲ್‌ಮೆಂಟ್‌ ಹಣ ಸೇರಿದಂತೆ 50 ಲಕ್ಷ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾಳೆ. ಆದರೆ, ಯೋಧ ತನಗೆ ಮದುವೆಯಾಗಿದ್ದರೂ ಯುವತಿಯ ಪ್ರೀತಿಯ ಬಲೆಗೆ ಸಿಲುಕಿ ಒದ್ದಾಡುತ್ತಿದ್ದನು. ಇದೆಲ್ಲವನ್ನೂ ತನ್ನ ಪತ್ನಿ ಯಶೋಧರೊಂದಿಗೆ ಹೇಳಿಕೊಂಡಿದ್ದನು. ಆದರೆ, ಲೇಡಿಯ ಕಾಟವನ್ನು ತಾಳಲಾರದೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯೋಧನ ಪತ್ನಿ ಯಶೋಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English