ಜಲ್ಲಿ ಸಾಗಿಸುವ ಲಾರಿ ಕಾರಿಗೆ ಡಿಕ್ಕಿಯಾಗಿ ಕಾರು ಜಖಂ

2:25 PM, Thursday, November 9th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ : ಜಲ್ಲಿ ಸಾಗಿಸುವ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಕಾರು ಮುಂಬಾಗ ಜಖಂ ಗೋಂಡಿದ್ದು, ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಇಂದು ಬೆಳಿಗ್ಗೆ ಬಂಟ್ವಾಳ ಸಮೀಪದ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಮೈಸೂರು ಮೂಲದ ಕೃಷ್ಣ ಅರಸ ಎಂಬವರು ಮೂಡಬಿದ್ರೆಗೆ ಸಂಚರಿಸುವಾಗ ಕಾರಿಗೆ ಲಾರಿ ಡಿಕ್ಕಿಯಾಗಿದೆ.

ಕೃಷ್ಣ ಅರಸ ಅವರ ಮಗಳು ಮೂಡಬಿದಿರೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ದೀಪಾವಳಿ ರಜೆ ನಿಮಿತ್ತ ಊರಿಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ಮೂಡಬಿದಿರೆಯ ಕಡೆಗೆ ತೆರಳುವ ವೇಳೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರು ಚಾಲಕ ಕೃಷ್ಣ ಅವರಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English