ಚುಟುಕು ಸಾಹಿತ್ಯ ಪರಿಷತ್ತಿನ 21ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ನಾರಾಯಣಯ್ಯ ಮೂಳೂರು ಆಯ್ಕೆ

6:50 PM, Thursday, November 16th, 2023
Share
1 Star2 Stars3 Stars4 Stars5 Stars
(5 rating, 1 votes)
Loading...

ಬಂಟ್ವಾಳ: ಬಂಟ್ವಾಳ ತಾಲೂಕಿನ ಮುಡಿಪು ಶ್ರೀ ಭಾರತಿ ಶಾಲೆಯ ಅಮೃತ ಮಹೋತ್ಸವದಲ್ಲಿ ನಡೆದ ಭಾರತಿ ಚುಟುಕು ಸಾಹಿತ್ಯ ಗೋಷ್ಠಿಯ ಸಂದರ್ಭದಲ್ಲಿ ಅದೇ ಶಾಲೆಯ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ನಾರಾಯಣಯ್ಯ ಮೂಳೂರು ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಹರೀಶ ಸುಲಾಯ ಒಡ್ಡಂಬೆಟ್ಟು ಅವರು ಶ್ರೀ ನಾರಾಯಣಯ್ಯ ಮೂಳೂರು ಅವರಿಗೆ ಶಾಲು ಹೊದಿಸುವ ಮೂಲಕ ಅವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಘೋಷಣೆ ಮಾಡಿದರು.

ದ.ಕ. ಜಿಲ್ಲಾ ಚುಸಾಪ ಗೌರವಾಧ್ಯಕ್ಷರಾದ ಶ್ರೀ ಇರಾ ನೇಮು ಪೂಜಾರಿ ಮತ್ತು ಶ್ರೀ ಭಾರತೀ ಶಾಲೆಯ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯ ಭಟ್ ಅವರು ನಾರಾಯಣಯ್ಯ ಅವರಿಗೆ ಹೂ ಗುಚ್ಛ ನೀಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಚುಸಾಪ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಶಾಸ್ತ್ರಿಯವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English