ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತ

5:55 PM, Friday, November 17th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಪುತ್ತೂರು : ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಆಸ್ಪತ್ರೆಗೆ ದಾಖಲಾದ ಘಟನೆ ಘಟನೆ ನ.16 ರಂದು ರಾತ್ರಿ ನಡೆದಿದೆ.

ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರಿಗೆ ಕಡಂಬಳ (ಕಟ್ಟಮಳಕ್ಕರಿ) ಕಡಿದಿದ್ದು, ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವಿನ ಕಡಿತ ತರಚಿದಂತ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ವಾಕಿಂಗ್ ಸಂದರ್ಭ ಅವರ ಜೊತೆಗಿದ್ದ ಹಿರೇಬಂಡಾಡಿ .ಪಂ. ಅಧ್ಯಕ್ಷ ಹಮ್ಮಬ್ಬ ಶೌಕತ್ ಅಲಿ ತಿಳಿಸಿದ್ದಾರೆ.

ಸಂಜೀವ ಮಠಂದೂರು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English