ಮಂಗಳೂರು : ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ (ಜೂನ್ 21) ದಿನಾಚರಣೆಯನ್ನು ಶಾಲೆಯ ಸಂಸ್ಥಾಪಕ ಅಧ್ಯಕ್ಷರು , ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಉದ್ಘಾಟಿಸಿದರು.
ಬಳಿಕ ವಿದ್ಯಾರ್ಥಿಗಳ ಜೊತೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಈ ಸಂದರ್ಭ ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿ ನಯೀಮ್ ಹಮೀದ್ ಉಪಸ್ಥಿತರಿದ್ದರು .. ಶಾಲೆಯ ಯೋಗ ಶಿಕ್ಷಕಿ ಭಾರತಿ ಯೋಗ ತರಬೇತಿ ನೀಡಿದರು.
Click this button or press Ctrl+G to toggle between Kannada and English