ಉಡುಪಿ : ಅಯ್ನಾಝ್ ಮತ್ತು ಕುಟುಂಬದ ಸದಸ್ಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಆರೋಪಿ ಪ್ರವೀಣ ಅರುಣ ಚೌಗುಲೆ ಮಹತ್ವದ ಅಂಶವನ್ನು ಬಾಯಿ ಬಿಟ್ಟಿದ್ದಾನೆ.
ಮೃತ ಅಯ್ನಾಝ್ ವಿಚಾರದಲ್ಲಿ ಆರೋಪಿ ಪ್ರವೀಣ್ ಚೌಗುಲೆ ಆಕೆಯನ್ನು ಬಹಳ ಹಚ್ಚಿಕೊಂಡಿದ್ದನು. ಅಯ್ನಾಝ್ ತನ್ನ ನಿಯಂತ್ರಣದಲ್ಲೇ ಇರಬೇಕು ಎಂಬ ಮನಸ್ಥಿತಿ ಹೊಂದಿದ್ದನು. ಅಸೂಯೆ ಮತ್ತು ದ್ವೇಷದಿಂದ ಅಯ್ನಾಝ್ಳನ್ನು ಕೊಲೆ ಮಾಡಲು ನಿರ್ಧರಿಸಿದ್ದನು. ಅಯ್ನಾಝ್ ತನ್ನ ಜೊತೆ ಮಾತ್ರ ಮಾತನಾಡಬೇಕು ಎಂಬ ನಿಯಮ ಹಾಕುತ್ತಿದ್ದನು, ನನ್ನ ಜೊತೆ ಮಾತ್ರ ಬೆರೆಯಬೇಕು ಎಂಬ ಮನಸ್ಥಿತಿಯನ್ನು ಹೊಂದಿದ್ದನು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಹೇಳಿದ್ದಾರೆ.
ಮೃತರ ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಮಾತನಾಡಿ ಉಸ್ತುವಾರಿ ಸಚಿವರು ಮನವಿ ಸ್ವೀಕಾರ ಮಾಡಿದ್ದಾರೆ. ಬೇಗ ನ್ಯಾಯ ಕೊಡಿಸುವ ವಿಶ್ವಾಸ ಕೊಟ್ಟಿದ್ದಾರೆ. ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಒತ್ತಾಯಿಸಿದ್ದೇವೆ. ಅಡ್ವಕೇಟ್ ಶಿವಪ್ರಸಾದ್ ಆಳ್ವ ಅವರನ್ನು ನೇಮಕ ಮಾಡಲು ಒತ್ತಾಯಿಸಿದ್ದೇವೆ. ಎಲ್ಲ ರೀತಿಯಲ್ಲಿ ಸಹಕಾರ ಕೊಡುವ ಆಶ್ವಾಸನೆ ನೀಡಿದ್ದಾರೆ ಎಂದು ಹೇಳಿದರು.