ಉಡುಪಿ : ಆತ್ಮಹತ್ಯೆಗೈಯಲು ಮಂಗಳೂರಿನಿಂದ ಉಡುಪಿಗೆ ಹೋಗಿದ್ದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಬುಧವಾರ ನಡೆದಿದೆ.
ಹೋಟೆಲಿನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ಉಡುಪಿಯ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೈಯಲು ಯತ್ನಿಸಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕ ಕಾರ್ಯಕರ್ತರು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಇವರು
ಕಾರ್ಯಕರ್ತರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು.
Click this button or press Ctrl+G to toggle between Kannada and English