ಕೆಡಿಪಿ ಸಭೆಯಲ್ಲಿ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತು ಉಡುಪಿ ಎಸ್ಪಿ ನಡುವೆ ವಾಕ್ಸಮರ

8:58 PM, Friday, November 24th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಉಡುಪಿ : ಕೆಡಿಪಿ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ನಡುವೆ ಪ್ರತಿಭಟನಾಕಾರರಿಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಜಟಾಪಟಿ ನಡೆದಿದೆ.

ಲಾರಿ ಮುಷ್ಕರ ಮಾಡಿದ್ದ ವೇಳೆ ಪೊಲೀಸ್ ವರಿಷ್ಠಾಧಿಕಾರಿ ನೋಟಿಸ್ ನೀಡಿದ್ದು ಈ ಬಗ್ಗೆ ವಾಗ್ದಾಳಿ ನಡೇಸಿರುವ ಸುನೀಲ್ ಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ. ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದಿದ್ದಾರೆ.

ಮಾಜಿ ಸಚಿವರ ಮಾತಿಗೆ ತಿರುಗೇಟು ನೀಡಿರುವ ಎಸ್ಪಿ, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಎಂದು ಪ್ರಶ್ನಿಸಿದ ಶಾಸಕರು ಮತ್ತು ಎಸ್ಪಿ ನಡುವೆ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಸಮಾಧಾನ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English