- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಟೋದಲ್ಲಿ ಇದ್ದ ವ್ಯಕ್ತಿಯ ಮೇಲೆ ಟಿಪ್ಪರ್ ಹರಿಸಿ ಕೊಲೆ

[1]

ಕಾರವಾರ: ಟಿಪ್ಪರ್ ಹರಿಸಿ ವ್ಯಕ್ತಿಯೊಬ್ಬನನ್ನು ಕೊಲೆಗೈದ ಘಟನೆ ಉತ್ತರಕನ್ನಡದ ಕಾರವಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತನನ್ನು ಓಲ್ವಿನ್ ಲೋಬೋ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಎಂದು ಗುರುತಿಸಲಾಗಿದೆ.

ವಿನಾಯಕ ನಾರಾಯಣ ಭಟ್ ಎಂಬಾತ ಈ ಕೃತ್ಯ ಎಸಗಿದ್ದು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕೇಶವ ನಾಯ್ಕನ ಜೊತೆ ಜಗಳವಾಡಿದ್ದ ಎಂದು ತಿಳಿದು ಬಂದಿದೆ.

ಗಲಾಟೆಯ ವಿಚಾರಕ್ಕೆ ಓಲ್ವಿನ್ ಲೋಬೋ, ಕೇಶವ ನಾಯ್ಕ ಹಾಗೂ ವಸಂತ ನಾಯ್ಕ ಆಟೋದಲ್ಲಿ ಇದ್ದ ವೇಳೆ ಆರೋಪಿ ವೇಗವಾಗಿ ಟಿಪ್ಪರ್ ತಂದು ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಚಾಲಕ ಓಲ್ವಿನ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಅಲ್ಲದೇ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬಳಿಕ ಆರೋಪಿ ವಿನಾಯಕ ಭಟ್ ತಲೆ ಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.