ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ಮಹಿಳೆಗೆ ಮದ್ಯ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ, ಹಲವರು ಭಾಗಿಯಾಗಿರುವ ಶಂಕೆ

9:33 PM, Wednesday, November 29th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಪುತ್ತೂರು : ಪುತ್ತೂರಿನ ಬಸ್‌ ನಿಲ್ದಾಣದಲ್ಲಿ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ ಅರೆ ಪ್ರಜ್ಞಾವಸ್ಥೆ ಸ್ಥಿತಿಗೆ ತಲುಪಿದ ನಂತರ ಅತ್ಯಾಚಾರ ಮಾಡಿದ ಘಟನೆಯಲ್ಲಿ ಹಲವರು ಭಾಗಿಯಾಗಿರುವ ಶಂಕೆಯನ್ನು ಬಜರಂಗದಳ ವ್ಯಕ್ತಪಡಿಸಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರಿನ ಭಜರಂಗದಳ ಇದೊಂದು ಜಿಹಾದಿ ಮಾನಸಿಕತೆಯ ಕೃತ್ಯ, ಇದು ಒಬ್ಬರಿಂದ ಅಸಾಧ್ಯ. ಇದು ಒಂದು ಗುಂಪಿನ ಕೆಲಸ ಎಂದು ಸಾಮೂಹಿಕ ಅತ್ಯಾಚಾರದ ಶಂಕೆಯನ್ನು ವ್ಯಕ್ತಪಸಿದ್ದು, ಪೋಲೀಸ್ ಇಲಾಖೆ ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ‌.

ಪುತ್ತೂರಿನ ಬಸ್‌ ನಿಲ್ದಾಣದಲ್ಲಿದ್ದ ಮಹಿಳೆಗೆ ನೀರಿನ ಬಾಟಲಿಯಲ್ಲಿ ಮದ್ಯ ಮಿಶ್ರಣ ಮಾಡಿ ಕುಡಿಸಿ. ನಂತರ, ಆಕೆ ಅರೆ ಪ್ರಜ್ಞಾವಸ್ಥೆಗೆ ತಲುಪುತ್ತಿದ್ದಂತೆಯೇ ಆಕೆಯನ್ನು ಸಾಲ್ಮರ ಎಂಬಲ್ಲಿಗೆ ಕರೆದುಕೊಮಡು ಹೋಗಿ ಅತ್ಯಾಚಾರ ಮಾಡಿ ಬಿಟ್ಟು ಹೋಗಿರುವ ರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ನ.24ರಂದು ಪುತ್ತೂರಿನಲ್ಲಿ ಘಟನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು. ಈ ಪ್ರಕರಣದ ಆರೋಪಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿಯಾದ ಸಂಶುದ್ದೀನ್ ಆಸ್ಗರ್ ಆಲಿ (23)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದವರು ಎಂದು ಗುರುತಿಸಲಾಗಿದೆ.

ಇದೇ ಪ್ರದೇಶದಲ್ಲಿ 2006ರಲ್ಲಿ ಸತ್ತರ್ ಎನ್ನುವವನಿಂದಲೂ ಅಕ್ಷತಾ ಎನ್ನುವ ಯುವತಿಯ ಕೊಲೆಯೂ ನಡೆದು ಭಾರೀ ಪ್ರತಿಭಟನೆ ನಡೆದು ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ಈ ಪ್ರದೇಶದಲ್ಲಿ ಅಕ್ರಮ ಚಟುವಟಿಕೆ ಮತ್ತು ಗಾಂಜಾ ಪ್ರಕರಣ ನಡೆಯುತ್ತಿರುವ ಬಗ್ಗೆ ಕೂಡಾ ಹಲವು ದೂರುಗಳು ದಾಖಲಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English