ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

2:34 PM, Monday, December 4th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಪುತ್ತೂರು : ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಮಾಡನ್ನೂರು ಗ್ರಾಮದ ಕಾವು ಬಂಗ್ಲೆ ಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಗೆ ಶರಣಾದವರು.

ಶಂಕರ್ 5 ವರ್ಷಗಳ ಹಿಂದೆ ಸಾಲ ಮಾಡಿ ಜಾಗ ಖರೀದಿ ಮಾಡಿದ್ದು, ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದೆ.

ಡಿ.3ರಂದು ಮನೆಯವರು ಮಲಗಿದ್ದಾಗ ಮನೆಯ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪತ್ನಿ ವನಿತಾ ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರ ಕರಣ ದಾಖಲಾಗಿದೆ.

ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ..ಮಕ್ಕಳನ್ನು ನೋಡಿಕೋ’ ಎಂಬುದಾಗಿ ಡೆತ್‌ನೋಟ್ ಬರೆದಿಟ್ಟಿದ್ದದ್ದು ಪತ್ತೆಯಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English