- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕುತ್ತಿಗೆಗೆ ಮರ ಕಡಿಯುವ ಯಂತ್ರ ತಗುಲಿ, ವ್ಯಕ್ತಿ ಸಾವು

[1]

ಬೆಳ್ತಂಗಡಿ : ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ.

ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ.

ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಅವರು ಕಟ್ಟಿಂಗ್ ಮೇಷಿನ್ ಹಿಡಿದು ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ ಕಾರಣ ಅದು ಅವರ ಕುತ್ತಿಗೆಗೆ ತಾಗಿದೆ. ಗಂಭೀರ ಗಾಯದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಸ್ಥಳೀಯ ಆಸ್ಪತೆಗೆ ದಾಖಲಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಸಹೋದರ ಪ್ರಮೋದ್ ಈ ಬಗ್ಗೆ ವೇಣೂರು ಠಾಣೆಯಲ್ಲಿ ದೂರು ನೀಡಿದ್ದಾರೆ