ಹೊಸ ವರ್ಷದ ಪಾರ್ಟಿಯಲ್ಲಿ ಸ್ನೇಹಿತನ ಮೂಗು ಕಚ್ಚಿದಾತನ ಬಂಧನ

7:04 PM, Wednesday, January 3rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿ ಕುಡಿದ ಮತ್ತಿನಲ್ಲಿ ಯುವಕನೋರ್ವನ ಮೂಗು ಕಚ್ಚಿದ ಪ್ರಕರಣ ನಡೆದಿದ್ದು ಆರೋಪಿಯನ್ನು ವೇಣೂರು ‘ಪೊಲೀಸರು ಬಂಧಿಸಿದ್ದಾರೆ.

ಮೂಡಿಗೆರೆ ತಾಲೂಕಿನ ರಾಕೇಶ್ (21) ಬಂಧಿತ ಆರೋಪಿಯಾಗಿದ್ದಾನೆ.

ಪ್ರಸಕ್ತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಮಾರಿಗುಡಿ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ರಾಕೇಶ್, ಡಿಸೆಂಬರ್ 31ರಂದು ರಾತ್ರಿ ಹೊಸ ವರ್ಚಾಚರಣೆ ಸಂದರ್ಭ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೀಕ್ಷಿತ್ (28) ಎಂಬವರ ಮೂಗನ್ನು ರಾಕೇಶ್ ಕಚ್ಚಿ ತುಂಡರಿಸಿದ್ದಾನೆ. ಘಟನೆಯಿಂದ ಗಾಯಗೊಂಡ ದೀಕ್ಷಿತ್ ಮಂಗಳೂರು ವೆನ್ಸಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ ದೀಕ್ಷಿತ್ ನೀಡಿದ ದೂರಿನಂತೆ ಆರೋಪಿ ರಾಕೇಶ್ ವಿರುದ್ಧ ಐಪಿಸಿ 504, 341, 324 ಹಾಗೂ 506ರಡಿ ಪ್ರಕರಣ ದಾಖಲಾಗಿತ್ತು. ಇದೀಗ ವೇಣೂರು ಸಬ್ ಇನ್ ಸ್ಪೆಕ್ಟರ್ ಶ್ರೀಶೈಲಾ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English