ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಕಿರುಕುಳ, ಪೊಲೀಸ್ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಧರಣಿ

2:15 PM, Sunday, January 28th, 2024
Share
1 Star2 Stars3 Stars4 Stars5 Stars
(5 rating, 1 votes)
Loading...

ಪುತ್ತೂರು: ಪುತ್ತೂರು ಕಂಬಳಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಇದರಿಂದ ಉದ್ರಿಕ್ತರಾದ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.

ಪುತ್ತೂರು ತಾಲೂಕಿನ ನಗರ ಠಾಣೆ ಎದುರು ಈ ಘಟನೆ ನಡೆದಿದೆ. ಕಡಬ ಮೂಲದ ಶಾಕೀರ್ ಎಂಬಾತನಿಂದ ಬಾಲಕಿಗೆ ಕಿರುಕುಳ ನೀಡದ್ದ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.

ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ವೇಳೆ ಕಿರುಕುಳ ನೀಡಲಾಗಿದೆ ಎನ್ನಲಾಗುತ್ತಿದ್ದು. ಆರೋಪಿ ಶಾರೀಕ್ ನನ್ನು ವಶಕ್ಕೆ ಪಡೆದ ಪುತ್ತೂರು ನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆಕ್ರೋಶಿತ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿ ಯುವಕರನ್ನು ಹಿಂದೂ ಮುಖಂಡ ಅರುಣ್ ಪುತ್ತಿಲ ಸಮಾಧಾನ ಪಡಿಸಿದ್ದಾರೆ . ಸದ್ಯ ಆರೋಪಿ ಶಾರೀಕ್ ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಗುಂಪು ಚದುರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English