ಶಿಕ್ಷಕನ ಅವಮಾನ ತಾಳಲಾರದೆ ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

10:09 PM, Tuesday, February 13th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಳ್ತಂಗಡಿ : ಶಿಕ್ಷಕ ಕಳುಹಿಸಿದ ಮೊಬೈಲ್ ಸಂದೇಶದಿಂದ ಅವಮಾನಗೊಂಡು ವಿಷ (ಇಲಿ ಪಾಷಾಣ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.

ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English