ಗಾಂಜಾ ನಶೆಯಲ್ಲಿ ಜೀಪು ಚಲಾಯಿಸಿ ಕಾರು ಮತ್ತು ಬೈಕ್‌ಗೆ ಡಿಕ್ಕಿ, ಕೊಲ್ಯ ನಿವಾಸಿ ಮೃತ್ಯು

10:04 PM, Tuesday, March 5th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದಲ್ಲಿ ಥಾರ್ ಜೀಪ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಟೈರ್‌ ಒಡೆದು ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಬ್ಯಾಲೆನ್ಸ್ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಸ್ಥಳೀಯರ ಪ್ರಕಾರ, ಜೀಪ್ ಚಲಾಯಿಸುತ್ತಿದ್ದ ಯುವಕರು ಗಾಂಜಾ ನಶೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಮೃತರನ್ನು ಕೊಲ್ಯ ನಿವಾಸಿ ಸಂತೋಷ ಬೆಳ್ಚಡ (45) ಎಂದು ಗುರುತಿಸಲಾಗಿದೆ. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಅವರು ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಧರ್ಮಸ್ಥಳಕ್ಕೆ ಭೇಟಿ ನೀಡಿ ಕಾಞಂಗಾಡಿಗೆ ಹಿಂತಿರುಗುತ್ತಿದ್ದ ಕುಟುಂಬವನ್ನು ಹೊತ್ತೊಯ್ಯುತ್ತಿದ್ದ ಬಲೆನೊ ಕಾರಿಗೆ ಅಜಾಗರೂಕತೆಯಿಂದ ವೇಗವಾಗಿ ಬಂದ ಥಾರ್ ಜೀಪ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಇದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ದುರಂತವೆಂದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಂತೋಷ್ ಸಾವನ್ನಪ್ಪಿದ್ದಾರೆ.ಸಂತೋಷ್ ತಂದೆ ತಾಯಿ, ಇಬ್ಬರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

ಕೊಲ್ಯ ನಿವಾಸಿಗಳು ಅಪಘಾತದ ಬಗ್ಗೆ ತೀವ್ರ ಆಕ್ರೋಶ ಮತ್ತು ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ, ಇದೇ ಸ್ಥಳದಲ್ಲಿ ಈ ಹಿಂದೆ ಹಲವಾರು ಅಪಘಾತಗಳು ಸಂಭವಿಸಿದ್ದು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿಯಾಗಿ, ಅವರು ಥಾರ್ ಜೀಪ್‌ನಲ್ಲಿದ್ದ ಮೂವರು ಯುವಕರು ಗಾಂಜಾ ಪ್ರಭಾವಕ್ಕೆ ಒಳಗಾಗಿದ್ದರು ಎಂದು ಆರೋಪಿಸಿದರು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English