ವಾಕ್ ಸ್ಟಿಕ್ ನಿಂದ ಥಳಿಸಿ ಕೆಇಬಿ ಅಧಿಕಾರಿಯಿಂದ ವೃದ್ಧ ಮಾವನ ಕೊಲೆಯತ್ನ

6:03 PM, Monday, March 11th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು: ತಂದೆ ಸಮಾನರಾದ ವೃದ್ಧ ಮಾವ ನಿಗೆ ಸೊಸೆಯೊಬ್ಬಳು ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ.

ಪದ್ಮನಾಭ ಸುವರ್ಣ(87), ಸೊಸೆಯಿಂದ ಹಲ್ಲೆಗೊಳಗಾದ ಮಾವ.

ಆರೋಪಿ ಸೊಸೆಯನ್ನು ಉಮಾಶಂಕರಿ ಎಂದು ಗುರುತಿಸಲಾಗಿದ್ದು, ಈಕೆ ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ ಅಧಿಕಾರಿಯಾಗಿದ್ದಾಳೆ. ಈಕೆಯ ರಾಕ್ಷಸಿ ಕೃತ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಮಾಶಂಕರಿ ಪತಿ ವಿದೇಶದಲ್ಲಿ ಉದ್ಯೋಗಲ್ಲಿದ್ದಾರೆ. ಪತಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 9 ರಂದು ಮಾವನಿಗೆ ವಾಕ್ ಸ್ಟಿಕ್ ನಲ್ಲಿ ಸೊಸೆ ಮನಬಂದಂತೆ ಥಳಿಸಿದ್ದಾಳೆ. ಮಾವ ಕೈಮುಗಿದು ಪರಿಪರಿಯಾಗಿ ಬೇಡಿಕೊಂಡರೂ ಬಿಡದೇ ಥಳಿಸಿದ್ದಾಳೆ. ಅಲ್ಲದೆ ಥಳಿಸುವುದನ್ನು ತಡೆಯಲು ಹೋದಾಗ ತಳ್ಳಿದ್ದಾಳೆ. ಪರಿಣಾಮ ವೃದ್ಧನ ಕೈ, ಮುಖಕ್ಕೆ ಗಾಯಗಳಾಗಿವೆ.

ಆದರೆ ಯಾವ ಕಾರಣಕ್ಕೆ ಸೊಸೆ ಮಾವನಿಗೆ ಹೊಡೆದಿದ್ದಾಳೆ ಅನ್ನೋ ವಿಚಾರ ತಿಳಿದುಬಂದಿಲ್ಲ. ಗಾಯಾಳು ಪದ್ಮನಾಭ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ತಂದೆಗೆ ಥಳಿಸಿದ ಉಮಾ ಶಂಕರಿ ವಿರುದ್ಧ ಸಿಸಿಟಿವಿ ದೃಶ್ಯ ಆಧರಿಸಿ ಪದ್ಮನಾಭ ಸುವರ್ಣರ ಮಗಳು ಪ್ರಿಯಾ ಸುವರ್ಣ ದೂರು ನೀಡಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಉಮಾಶಂಕರಿ ವಿರುದ್ಧ ಕೊಲೆಯತ್ನ ದೂರು ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English